ಮಂಡ್ಯದ ಈ ಸರ್ಕಾರಿ ಶಾಲೆ ಈಗ ಜ್ಞಾನದ ದೇಗುಲ - ಖಾಸಗಿ ಶಾಲೆಗಳಿಗೂ ಸವಾಲು. ದಾಖಲಾತಿಯಲ್ಲೂ ಹೆಚ್ಚಳ
ಸಾಮಾನ್ಯವಾಗಿ ಸರ್ಕಾರಿ ಶಾಲೆಗಳೆಂದರೆ ಪಾಳುಬಿದ್ದ ಕಟ್ಟಡ, ಮೂಲಸೌಕರ್ಯದ ಕೊರತೆ ಎಂಬ ಮಾತು ಕೇಳಿಬರುತ್ತದೆ. ಆದರೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಅಮೃತೇಶ್ವರನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಈ ಎಲ್ಲಾ ಮಾತುಗಳನ್ನು ಸುಳ್ಳು ಮಾಡಿ, ಇಂದು ರಾಜ್ಯಕ್ಕೆ ಮಾದರಿಯಾಗಿ ನಿಂತಿದೆ. ಹೌದು ಇತ್ತೀಚಿನ ದಿನಗಳಲ್ಲಿ ಪೋಷಕರ ಖಾಸಗಿ ಶಾಲೆಗಳ ವ್ಯಾಮೋಹದಿಂದ ಸರ್ಕಾರಿ ಶಾಲೆಗಳು ಮುಚ್ಚುತ್ತಿದ್ದರೆ, ಇಲ್ಲೊಂದು ಗ್ರಾಮದ ಯುವಕರು ಹಾಗೂ ಗ್ರಾಮಸ್ಥರು ಟ್ರಸ್ಟ್ ರಚಿಸಿ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಪಣತೊಟ್ಟು ಮಾದರಿಯಾಗಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಅಮೃತೇಶ್ವರನಹಳ್ಳಿಯ ಯುವಕರು ಹಾಗೂ ಗ್ರಾಮಸ್ಥರು ಅಮೃತ ಚಾರಿಟಬಲ್ ಟ್ರಸ್ಟ್ ರಚಿಸಿಕೊಂಡು ನಾಲ್ಕು ವರ್ಷಗಳಿಂದ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ₹23 ಲಕ್ಷ ವ್ಯಯಿಸಿದ್ದಾರೆ. ಮತ್ತೊಂದು ವಿಶೇಷವೆಂದರೆ ಪ್ರಸ್ತುತ ಸಾಲಿನಲ್ಲಿ ಗ್ರಾಮದ ಯಾವುದೇ ಮಕ್ಕಳು ಎಲ್ಕೆಜಿ, ಯುಕೆಜಿಗೆ ಸೇರಿದಂತೆ ಕೆಲ ತರಗತಿಗಳಿಗೆ ಬೇರೆಡೆ ದಾಖಲಾಗದಂತೆ ಅರಿವು ಮೂಡಿಸಿ ಸರ್ಕಾರಿ ಶಾಲೆಗೆ ದಾಖಲಾಗುವಂತೆ ಮಾಡುವಲ್ಲಿ ಟ್ರಸ್ಟ್ ಮತ್ತು ಎಸ್ಡಿಎಂಸಿ ಪದಾಧಿಕಾರಿಗಳು ಯಶಸ್ವಿಯಾಗಿದ್ದಾರೆ. ಮೂಲಸೌಕರ್ಯಗಳ ಕೊರತೆ ಎದುರಿಸುತ್ತಿದ್ದ ಈ ಶಾಲೆಗೆ ಊರಿನ ಜನರು, ಯುವಕರು ಮತ್ತು ದಾನಿಗಳು ಸೇರಿ ಎಲ್ಲ ಕೊರತೆಗಳನ್ನು ನೀಗಿಸಿ ಸ್ಮಾರ್ಟ್ ಶಾ...